ಅಕ್ಕಿಯಿಲ್ಲದ ತುಷಕ್ಕೆ ಅಗ್ಗವಣಿಯನೆರೆದಡೆ
ಅದೆಂದಿಂಗೆ ಬೆಳೆದು ಫಲವಪ್ಪುದಯ್ಯಾ
ಅರಿವಿಲ್ಲದವರಿಗೆ ಆಚಾರವಿದ್ದಡೆ
ಅರಕೆಗೆಟ್ಟು ಸುಖವೆಂದಪ್ಪುದಯ್ಯಾ
ಹೊರೆದ ಪರಿಮಳ ಸ್ಥಿರವಾಗಬಲ್ಲುದೆ
ಎನ್ನದೇವ ಚೆನ್ನಮಲ್ಲಿಕಾರ್ಜುನನನರಿಯದವರಿಗೆ
ಆಚಾರವಿಲ್ಲ ಕಾಣಿರಣ್ಣಾ
ಅಕ್ಕಿಯಿಲ್ಲದ ತುಷಕ್ಕೆ ಅಗ್ಗವಣಿಯನೆರೆದಡೆ
ಅದೆಂದಿಂಗೆ ಬೆಳೆದು ಫಲವಪ್ಪುದಯ್ಯಾ
ಅರಿವಿಲ್ಲದವರಿಗೆ ಆಚಾರವಿದ್ದಡೆ
ಅರಕೆಗೆಟ್ಟು ಸುಖವೆಂದಪ್ಪುದಯ್ಯಾ
ಹೊರೆದ ಪರಿಮಳ ಸ್ಥಿರವಾಗಬಲ್ಲುದೆ
ಎನ್ನದೇವ ಚೆನ್ನಮಲ್ಲಿಕಾರ್ಜುನನನರಿಯದವರಿಗೆ
ಆಚಾರವಿಲ್ಲ ಕಾಣಿರಣ್ಣಾ