ಅನುತಾಪದೊಡಲಿಂದೆ ಬಂದ ನೋವನುಂಬವರು

ಅನುತಾಪದೊಡಲಿಂದೆ ಬಂದ ನೋವನುಂಬವರು
ಒಡಲೊ, ಪ್ರಾಣವೊ, ಆರು ಹೇಳಾ

ಎನ್ನೊಡಲಿಂಗೆ ನೀನು ಪ್ರಾಣವಾದ ಬಳಿಕ
ಎನ್ನ ಒಡಲ ಸುಖ ದುಃಖವಾರ ತಾಗುವುದು ಹೇಳಯ್ಯಾ ?

ಚೆನ್ನಮಲ್ಲಿಕಾರ್ಜುನಯ್ಯಾ,
ಎನ್ನ ನೊಂದ ನೋವು, ಬೆಂದ ಬೇಗೆ,ನಿಮ್ಮ ತಾಗದೆ ಹೋಹುದೆ ಅಯ್ಯಾ

Leave a Comment

Your email address will not be published. Required fields are marked *