ಅನ್ನವ ನೀಡುವವರಿಂಗೆ ಧಾನ್ಯವೆಸೆವ ಲೋಕ.

ಅನ್ನವ ನೀಡುವವರಿಂಗೆ ಧಾನ್ಯವೆಸೆವ ಲೋಕ.
ಅರ್ಥವ ಕೊಡುವವರಿಂಗೆ ಪಾಷಾಣವೆಸೆವ ಲೋಕ.
ಹೆಣ್ಣು ಹೊನ್ನು ಮಣ್ಣು ಮೂರನೂ
ಕಣ್ಣಿನಲಿ ನೋಡಿ, ಕಿವಿಯಲಿ ಕೇಳಿ,
ಕೈಯಲಿ ಮುಟ್ಟಿ, ಮಾಡುವ ಭಕ್ತಿ
ಸಣ್ಣವರ ಸಮಾರಾಧನೆಯಾಯಿತ್ತು.
ತನ್ನನಿತ್ತು ತುಷ್ಟಿವಡೆವರನೆನಗೆ
ತೋರಾಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *