ಅಯ್ಯಾ, ಕತ್ತಲೆಯ ಕಳೆದುಳಿದ ಸತ್ಯಶರಣರ

ಅಯ್ಯಾ, ಕತ್ತಲೆಯ ಕಳೆದುಳಿದ ಸತ್ಯಶರಣರ
ಪರಿಯನೇನೆಂಬೆನಯ್ಯಾ

ಘನವನೊಳಕೊಂಡ ಮನದ ಮಹಾನುಭಾವಿಗಳ
ಬಳಿವಿಡಿದು ಬದುಕುವೆನಯ್ಯಾ.

ಅಯ್ಯಾ, ನಿನ್ನಲ್ಲಿ ನಿಂದು ಬೇರೊಂದರಿಯದ
ಲಿಂಗಸುಖಿಗಳ ಸಂಗದಲ್ಲಿ ದಿನವ ಕಳೆಯಿಸಯ್ಯಾಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *