ಅಯ್ಯಾ, ನಾನು ದಾಸೋಹವ ಮಾಡುವೆನಲ್ಲದೆ,

ಅಯ್ಯಾ, ನಾನು ದಾಸೋಹವ ಮಾಡುವೆನಲ್ಲದೆ,
ಸಮಯವನರಿಯೆ, ಅಯ್ಯಾ, ನಾನು ಭಕ್ತಿಯ ಮಾಡುವೆನಲ್ಲದೆ,
ಭಾವವನರಿಯೆ. ಸ್ಥಳಕುಳವ ವಿಚಾರಿಸಿದಡೆ, ಎನ್ನಲ್ಲಿ ಏನೂ ಹುರುಳಿಲ್ಲ,
ನಿಮ್ಮ ಶರಣರ ಸೋಂಕಿನಲ್ಲಿ ಶುದ್ಧನಾದೆನು. ಕೂಡಲಸಂಗಮದೇವರು ಸಾಕ್ಷಿಯಾಗಿ,
ಮಡಿವಾಳ ಮಾಚಿತಂದೆಗಳ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು.

Leave a Comment

Your email address will not be published. Required fields are marked *