ಅಯ್ಯಾ, ನಿಮ್ಮ ಶರಣರು ಮೆಟ್ಟಿದ ಧರೆ ಪಾವನವಯ್ಯಾ

ಅಯ್ಯಾ, ನಿಮ್ಮ ಶರಣರು ಮೆಟ್ಟಿದ ಧರೆ ಪಾವನವಯ್ಯಾ.

ಅಯ್ಯಾ, ನಿಮ್ಮ ಶರಣರಿದ್ದ ಪುರವೆ ಕೈಲಾಸಪುರವಯ್ಯಾ.

ಅಯ್ಯಾ, ನಿಮ್ಮ ಶರಣರು ನಿಂದುದೆ ನಿಜನಿವಾಸವಯ್ಯಾ.

ಚೆನ್ನಮಲ್ಲಿಕಾರ್ಜುನಯ್ಯಾ,
ನಿಮ್ಮ ಶರಣ ಬಸವಣ್ಣನಿದ್ದ ಕ್ಷೇತ್ರ ಅವಿಮುಕ್ತ ಕ್ಷೇತ್ರವಾಗಿ,
ಆನು ಸಂಗನಬಸವಣ್ಣನ ಶ್ರೀಪಾದಕ್ಕೆನಮೋ ನಮೋ ಎನುತಿರ್ದೆನು.

Leave a Comment

Your email address will not be published. Required fields are marked *