ಅರಸಿನಂತೆ ಬಂಟನೋ ಹನುಮರಾಯ 

ಅರಸಿನಂತೆ ಬಂಟನೆಂಬುದ ನೀನುಕುರುಹು ತೋರಿದೆ ಮೂರು ಲೋಕಕೆ ಹನುಮ

ಒಡೆಯನಂಬುಧಿಯೊಳು ಪೊಕ್ಕು ದೈತ್ಯನ ಕೊಂದುತಡೆಯದೆ ಶ್ರುತಿಯನಜಗಿತ್ತನೆಂದುಸಡಗರದಿಂದ ಶರಧಿಯ ದಾಂಟಿ ಮಹಿಜೆ ಪೆ-ರ್ಮುಡಿಯ ಮಾಣಿಕವ ರಾಘವಗಿತ್ತೆ ಹನುಮ ||1||

ಮಂದರಧರ ಗೋವರ್ಧನ ಗಿರಿಯನು ಲೀಲೆ-ಯಿಂದಲಿ ನಿಂದು ನೆಗಹಿದನೆಂದುಸಿಂಧು ಬಂಧನಕೆ ಸಮಸ್ತ ಪರ್ವತಗಳತಂದು ನಳನ ಕೈಯೊಳಗಿತ್ತೆ ಹನುಮ ||2||

ಸಿರಿಧರ ವರ ಕಾಗಿನೆಲೆಯಾದಿಕೇಶವಸುರರಿಗಮೃತವನು ಎರೆದನೆಂದುವರ ಸಂಜೀವನವ ತಂದು ಸೌಮಿತ್ರಿಗಂದುಎರೆದು ಶ್ರೀರಾಮನ ನಿಜದೂತನೆನಿಸಿದೆ ಹನುಮ ||3||

Leave a Comment

Your email address will not be published. Required fields are marked *