ಅರಸಿ ತೊಳಲಿದಡಿಲ್ಲ, ಹರಸಿ ಬಳಲಿದಡಿಲ್ಲ,
ಬಯಸಿ ಹೊಕ್ಕಡಿಲ್ಲ, ತಪಸ್ಸು ಮಾಡಿದಡಿಲ್ಲ.
ಅದು ತಾನಹ ಕಾಲಕ್ಕಲ್ಲದೆ ಸಾಧ್ಯವಾಗದು.
ಶಿವನೊಲಿದಲ್ಲದೆ ಕೈಗೂಡದು.
ಚೆನ್ನಮಲ್ಲಿಕಾರ್ಜುನನೆನಗೊಲಿದನಾಗಿನಾನು
ಸಂಗನಬಸವಣ್ಣನ ಶ್ರೀಪಾದವ ಕಂಡು ಬದುಕಿದೆನು.
ಅರಸಿ ತೊಳಲಿದಡಿಲ್ಲ, ಹರಸಿ ಬಳಲಿದಡಿಲ್ಲ,
ಬಯಸಿ ಹೊಕ್ಕಡಿಲ್ಲ, ತಪಸ್ಸು ಮಾಡಿದಡಿಲ್ಲ.
ಅದು ತಾನಹ ಕಾಲಕ್ಕಲ್ಲದೆ ಸಾಧ್ಯವಾಗದು.
ಶಿವನೊಲಿದಲ್ಲದೆ ಕೈಗೂಡದು.
ಚೆನ್ನಮಲ್ಲಿಕಾರ್ಜುನನೆನಗೊಲಿದನಾಗಿನಾನು
ಸಂಗನಬಸವಣ್ಣನ ಶ್ರೀಪಾದವ ಕಂಡು ಬದುಕಿದೆನು.