ಆತುರದ ಧ್ಯಾನದಿಂದ ಧಾವತಿಗೊಂಡೆ

ಆತುರದ ಧ್ಯಾನದಿಂದ ಧಾವತಿಗೊಂಡೆ ;
ಜ್ಯೋತಿರ್ಲಿಂಗವ ಕಾಣಿಸಬಾರದು.
ಮಾತಿನ ಮಾಲೆಗೆ ಸಿಲುಕುವನಲ್ಲ ;
ಧಾತುಗೆಡಿಸಿ ಮನವ ನೋಡಿ ಕಾಡುವನು.
ಆತುಮನಂತರ ಪರವನರಿದಡೆ ಆತನೆ ಯೋಗಿ ;
ಆತನ ಪಾದಕ್ಕೆ ಶರಣೆಂಬೆನಯ್ಯಾಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *