ಆಯತ ಸ್ವಾಯತ ಅನುಭಾವವ ನಾನೆತ್ತ ಬಲ್ಲೆನಯ್ಯಾ
ಗುರು ಲಿಂಗ ಜಂಗಮಕ್ಕೆ ಅರ್ಥಪ್ರಾಣಾಭಿಮಾನವಂ ಸಮರ್ಪಿಸಿ,
ಅಹಂಕಾರವಳಿದಿಹಂತಹ ಪುರಾತನರ ಮನೆಯಲ್ಲಿ
ಭೃತ್ಯರ ಭೃತ್ಯಳಾಗಿಪ್ಪೆನಯ್ಯಾ.
ಇದು ಕಾರಣ, ಚೆನ್ನಮಲ್ಲಿಕಾರ್ಜುನಯ್ಯನ ಗಣಂಗಳಲ್ಲದನ್ಯವ ನಾನರಿಯೆನಯ್ಯಾ.
ಆಯತ ಸ್ವಾಯತ ಅನುಭಾವವ ನಾನೆತ್ತ ಬಲ್ಲೆನಯ್ಯಾ
ಗುರು ಲಿಂಗ ಜಂಗಮಕ್ಕೆ ಅರ್ಥಪ್ರಾಣಾಭಿಮಾನವಂ ಸಮರ್ಪಿಸಿ,
ಅಹಂಕಾರವಳಿದಿಹಂತಹ ಪುರಾತನರ ಮನೆಯಲ್ಲಿ
ಭೃತ್ಯರ ಭೃತ್ಯಳಾಗಿಪ್ಪೆನಯ್ಯಾ.
ಇದು ಕಾರಣ, ಚೆನ್ನಮಲ್ಲಿಕಾರ್ಜುನಯ್ಯನ ಗಣಂಗಳಲ್ಲದನ್ಯವ ನಾನರಿಯೆನಯ್ಯಾ.