ಆರು ಬದುಕಿದರಯ್ಯ ಹರಿ ನಿನ್ನ ನಂಬಿ 

ಆರು ಬದುಕಿದರಯ್ಯ ಹರಿ ನಿನ್ನ ನಂಬಿ
ತೋರು ಈ ಧರೆಯೊಳಗೆ ಒಬ್ಬರನು ಕಾಣೆ ಕೃಷ್ಣ

ಕಲಹ ಬಾರದ ಮುನ್ನ ಕರ್ಣನೊಬ್ಬನ ಕೊಂದೆಸುಲಭದಲಿ ಕೌರವರ ಮನೆಯ ಮುರಿದೆನೆಲನ ಬೇಡಲು ಪೋಗಿ ಬಲಿಯ ಭೂಮಿಗೆ ತುಳಿದೆಮೊಲೆಯನುಣ್ಣಲು ಪೋಗಿ ಪೂತನಿಯ ಕೊಂದೆ ||1||

ಕರುಳೊಳಗೆ ಕತ್ತರಿಯನಿಟ್ಟೆ ಹಂಸಧ್ವಜನಸರಸದಿಂ ಮಗಳ ಗಂಡನ ಕೊಲಿಸಿದೆಮರುಳಿನಿಂದಲಿ ಪೋಗಿ ಭೃಗುಮುನಿಯ ಕಣ್ಣೊಡೆದೆಅರಿತು ನರಕಾಸುರನ ಹೆಂಡಿರನು ತಂದೆ||2||

ತಿರಿದುಂಬ ದಾಸರ ಕೈ ಕಪ್ಪ ಕೊಂಬ ಮರ್ಮತಿರುಮಲಾಚಾರ್ಯ ಶ್ರೀಗುರುವೆ ಬಲ್ಲವರ ಕಾಗಿನೆಲೆಯಾದಿಕೇಶವನ ಭಜಿಸಿದರೆತಿರಿವೆನೆಂದರು ತಿರುಪೆ ಕೂಳ್ ಪುಟ್ಟದೈ ಕೃಷ್ಣ||3||

Leave a Comment

Your email address will not be published. Required fields are marked *