ಉಣಲೆಂದು ಬಂದ ಸುಖ ಉಂಡಲ್ಲದೆ ಹರಿಯದು.
ಕಾಣಲೆಂದು ಬಂದ ದುಃಖ ಕಂಡಲ್ಲದೆ ಹರಿಯದು.
ತನುವಿಂಗೆ ಬಂದ ಕರ್ಮ ಹರಿವ ಕಾಲಕ್ಕೆ
ಚೆನ್ನಮಲ್ಲಿಕಾರ್ಜುನದೇವರು ಕಡೆಗಣ್ಣಿನಿಂದ ನೋಡಿದರು.
ಉಣಲೆಂದು ಬಂದ ಸುಖ ಉಂಡಲ್ಲದೆ ಹರಿಯದು.
ಕಾಣಲೆಂದು ಬಂದ ದುಃಖ ಕಂಡಲ್ಲದೆ ಹರಿಯದು.
ತನುವಿಂಗೆ ಬಂದ ಕರ್ಮ ಹರಿವ ಕಾಲಕ್ಕೆ
ಚೆನ್ನಮಲ್ಲಿಕಾರ್ಜುನದೇವರು ಕಡೆಗಣ್ಣಿನಿಂದ ನೋಡಿದರು.