ಉಣಲೆಂದು ಬಂದ ಸುಖ ಉಂಡಲ್ಲದೆ ಹರಿಯದು.

ಉಣಲೆಂದು ಬಂದ ಸುಖ ಉಂಡಲ್ಲದೆ ಹರಿಯದು.
ಕಾಣಲೆಂದು ಬಂದ ದುಃಖ ಕಂಡಲ್ಲದೆ ಹರಿಯದು.
ತನುವಿಂಗೆ ಬಂದ ಕರ್ಮ ಹರಿವ ಕಾಲಕ್ಕೆ
ಚೆನ್ನಮಲ್ಲಿಕಾರ್ಜುನದೇವರು ಕಡೆಗಣ್ಣಿನಿಂದ ನೋಡಿದರು.

Leave a Comment

Your email address will not be published. Required fields are marked *