ಉರಿಯ ಫಣಿಯನುಟ್ಟು ಊರಿಂದ ಹೊರಗಿರಿಸಿ,

ಉರಿಯ ಫಣಿಯನುಟ್ಟು ಊರಿಂದ ಹೊರಗಿರಿಸಿ,
ಕರೆಯಲಟ್ಟಿದ ಸಖಿಯ ನೆರೆದ ನೋಡೆಲೆಗವ್ವಾ.
ತೂರ್ಯಾವಸ್ಥೆಯಲ್ಲಿ ತೂಗಿ ತೂಗಿ ನೋಡಿ
ಬೆರಗಾಗಿ ನಿಲಲಾರೆನವ್ವಾ.
ಆರವಸ್ಥೆ ಕರ ಹಿರಿದು ಎಲೆ ತಾಯೆ.
ಗಿರಿ ಬೆಂದು ತರುವುಳಿದು ಹೊನ್ನರಳೆಯ ಮರನುಲಿವಾಗ
ಹಿರಿಯತನಗೆಡಿಸಿ ನೆರೆವೆನು ಚೆನ್ನಮಲ್ಲಿಕಾರ್ಜುನನ.

Leave a Comment

Your email address will not be published. Required fields are marked *