ಉಸುರಿನ ಪರಿಮಳವಿರಲು

ಉಸುರಿನ ಪರಿಮಳವಿರಲು
ಕುಸುಮದ ಹಂಗೇಕಯ್ಯಾ
ಕ್ಷಮೆ ದಮೆ ಶಾಂತಿ ಸೈರಣೆಯಿರಲು
ಸಮಾಧಿಯ ಹಂಗೇಕಯ್ಯಾ
ಲೋಕವೆ ತಾನಾದ ಬಳಿಕ ಏಕಾಂತದ
ಹಂಗೇಕಯ್ಯಾ ಚೆನ್ನಮಲ್ಲಿಕಾರ್ಜುನಾ ?

Leave a Comment

Your email address will not be published. Required fields are marked *