ಒಡಲಿಲ್ಲದ ನುಡಿಯಿಲ್ಲದ ಕಡೆಯಿಲ್ಲದ

ಒಡಲಿಲ್ಲದ ನುಡಿಯಿಲ್ಲದ ಕಡೆಯಿಲ್ಲದ
ನಲ್ಲನ ಒಡಗೂಡಿ ಸುಖಿಯಾದೆ ಕೇಳಿರಯ್ಯಾ.
ಭಾಷೆ ಪೈಸರವಿಲ್ಲ, ಓಸರಿಸೆನನ್ಯಕ್ಕೆ,
ಆಸೆ ಮಾಡೆನು ಮತ್ತೆ ಭಿನ್ನ ಸುಖಕ್ಕೆ.
ಅರಳಿದು ಮೂರಾಗಿ, ಮೂರಳಿದು ಎರಡಾಗಿ,
ಎರಡಳಿದು ಒಂದಾಗಿ ನಿಂದೆನಯ್ಯಾ.
ಬಸವಣ್ಣ ಮೊದಲಾದ ಶರಣರಿಗೆ ಶರಣಾರ್ಥಿ
ಆ ಪ್ರಭುವಿನಿಂದ ಕೃತಕೃತ್ಯಳಾದೆನು ನಾನು.
ಮರೆಯಲಾಗದು, ನಿಮ್ಮ ಶಿಶುವೆಂದು ಎನ್ನನು, ಚೆನ್ನಮಲ್ಲಿಕಾರ್ಜುನನ ಬೆರೆಸೆಂದು ಹರಸುತ್ತಿಹುದು.

Leave a Comment

Your email address will not be published. Required fields are marked *