ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ ಇಲ್ಲವೆಂದು – ಮಿಕ್ಕಬಣಗು ದೈವದ ಗೊಡವೆ ಬೇಡ ನರಕ ತಪ್ಪದು
ಎಕ್ಕನಾತಿಯರು ಕಾಟಿ ಜಕ್ಕಿ ಜಲಕನ್ಯೆಯರುಸೊಕ್ಕಿನಿಂದ ಸೊಂಟಮುರುಕ ಬೈರೇ ದೇವರುಮಿಕ್ಕ ಮಾರಿ ಮಸಣಿ ಚೌಡಿ ಮೈಲಾರಿ ಮೊದಲಾದಠಕ್ಕು ದೈವದ ಗೊಡವೆ ಬೇಡ ನರಕ ತಪ್ಪದು ||1||
ಸುತ್ತಣವರ ಮಾತ ಕೇಳಿ ಗುತ್ತಿಯ ಎಲ್ಲಮ್ಮಗೊಲಿದುಬತ್ತಲೆಯೆ ದೇವರೆದುರು ಬರುವುದು ನೋಡಿರೊಮತ್ತೆ ಬೇವಿನುಡುಗೆಯ ಅರ್ತಿಯಿಂದುಟುಗೊಂಡುಮುಕ್ತಿ ಕಾಂಬೆವೆಂಬ ಮೌಢ್ಯ ಬೇಡಿರಯ್ಯ ||2||
ತೂಳದವರ ಮಾತ ಕೇಳಿ ಖೂಳರೆಲ್ಲ ಕೂಡಿಕೊಂಡುಹಾಳು ಮಾಡಿ ಕೈಯಲಿದ್ದ ಹೊನ್ನು ಹಣಗಳಬಾಳುತಿಪ್ಪ ಕೋಣ ಕುರಿಯ ಏಳಬೀಳ ಕೊರಳ ಕೊಯ್ದುಬೀಳ ಬೇಡಿ ನರಕಕೆಂದು ಹೇಳ ಬಂದೆನೊ||3||
ಹೊಳ್ಳದ ಬಿಚ್ಚೇರು ಸಹಿತ ಸುಳ್ಳರೆಲ್ಲ ಕೂಡಿಕೊಂಡುಬೆಳ್ಳನ ಬೆಳತನಕ ನೀರ ತಡಿಯಲಿ ಕುಳಿತುಗುಳ್ಳೆ ಗೊರಜೆ ಕೂಡಿ ತಿಂದು ಕಳ್ಳು ಕೊಡನ ಬರಿದು ಮಾಡುವಂಥಪೊಳ್ಳು ದೈವದ ಗೊಡವೆ ಬೇಡ ನರಕ ತಪ್ಪದು||4||
ಪೊಡವಿಗಧಿಕ ವಿಜಯನಗರದೊಡೆಯ ಕಟ್ಟೆ ವೆಂಕಟೇಶಕಡು ಚೆಲ್ವ ಕಟ್ಟಾಣಿ ಕನಕನೊಡೆಯಬಡದಾದಿ ಕೇಶವನ ಪಾದಬಿಡದೆ ಭಜಿಸಿರೊಜಡದೈವಗಳ ಇಂಥ ಪೂಜೆ ಬೇಡ ಕಾಣಿರೋ ||5||