ಕಾಡುವ ದುರಿತಗಳನು ಬಿಡಿಸೆಂದುಬೇಡಿಕೊಂಬೆನೊ ದೇವ ನಾ ನಿನ್ನ
ಅಡಿದಾಸನೆಂಬೋ ಎನಗೊಂದು ದೃಢ ಬುದ್ಧಿಯು ಇಲ್ಲದೆಮಡದಿ ಮಕ್ಕಳೆಂಬೊ ಕಡಲೊಳು ಮುಳುಗಿದೆಕಡೆ ಹಾಯಿಸೊ ಎನ್ನೊಡೆಯ ನೀನಾದಡೆ ||1||
ಆಸೆಗಳ ಆಧಿಕ್ಯದಿಂದೀ ಪರಿಯ ಯಮಪಾಶಕ್ಕೆ ಒಳಗಾದೆನೋಮೀಸಲೂಳಿಗವ ಮಾಡದೆಯೆ ಪರಿಪರಿಯಕ್ಲೇಶದಿಂದಲಿ ಗಾಸಿಗೊಂಡೆನಯ್ಯ ||2||
ಪಾಡುವೆನು ನಿನ್ನ ನಾಮ ಸೀತಾರಾಮಆಡುವೆನು ಮನದಣಿವ ತನಕಬೇಡಿಕೊಂಬೆನೊ ನಿನ್ನ ಭಕ್ತರ ಸೇವೆಯನುಬಾಡದಾದಿಕೇಶವ ಭಕ್ತವತ್ಸಲನೆ||3||