ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು.

ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು.
ಮುಗಿಲು ಹರಿದು ಬಿದ್ದಡೆ ಎನಗೆ ಮಜ್ಜನಕ್ಕೆರೆದರೆಂಬೆನು.
ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು.
ಚೆನ್ನಮಲ್ಲಿಕಾರ್ಜುನಯ್ಯಾ, ಶಿರ ಹರಿದು ಬಿದ್ದಡೆ ಪ್ರಾಣ ನಿಮಗರ್ಪಿತವೆಂಬೆನು.

Leave a Comment

Your email address will not be published. Required fields are marked *