ಕುಲಗಿರಿಯ ಶಿಖರದ ಮೇಲೆ ಬಾಳೆ ಬೆಳೆವುದಯ್ಯಾ ಎಂದಡೆ,

ಕುಲಗಿರಿಯ ಶಿಖರದ ಮೇಲೆ ಬಾಳೆ ಬೆಳೆವುದಯ್ಯಾ ಎಂದಡೆ,
ಬಾಳೆ ಬೆಳೆವುದಯ್ಯಾ ಎನಬೇಕು.
ಓರೆಗಲ್ಲ ನುಗ್ಗುಗುಟ್ಟಿ ಮೆಲಬಹುದಯ್ಯಾ ಎಂದಡೆ,
ಅದು ಅತ್ಯಂತ ಮೃದು ಮೆಲಬಹುದಯ್ಯಾ ಎನಬೇಕು.
ಸಿಕ್ಕದ ಠಾವಿನಲ್ಲಿ ಉಚಿತವ ನುಡಿವುದೆ ಕಾರಣ
ಚೆನ್ನಮಲ್ಲಿಕಾರ್ಜುನ ಮತ್ರ್ಯಕ್ಕೆ ಬಂದುದಕ್ಕಿದೆ ಗೆಲವು.

Leave a Comment

Your email address will not be published. Required fields are marked *