ಗುರುವೆಂಬ ತೆತ್ತಿಗನು
ಲಿಂಗವೆಂಬಲಗನು ಮನನಿಷ್ಠೆಯೆಂಬ ಕೈಯಲ್ಲಿ ಕೊಡಲು,
ಕಾದಿದೆ ಗೆಲಿದೆ ಕಾಮನೆಂಬವನ,
ಕ್ರೋಧಾದಿಗಳು ಕೆಟ್ಟು, ವಿಷಯಂಗಳೋಡಿದವು.
ಅಲಗು ಎನ್ನೊಳು ನಟ್ಟು ಆನಳಿದ ಕಾರಣ ಚೆನ್ನಮಲ್ಲಿಕಾರ್ಜುನಲಿಂಗವ ಕರದಲ್ಲಿ ಹಿಡಿದೆ.
ಗುರುವೆಂಬ ತೆತ್ತಿಗನು
ಲಿಂಗವೆಂಬಲಗನು ಮನನಿಷ್ಠೆಯೆಂಬ ಕೈಯಲ್ಲಿ ಕೊಡಲು,
ಕಾದಿದೆ ಗೆಲಿದೆ ಕಾಮನೆಂಬವನ,
ಕ್ರೋಧಾದಿಗಳು ಕೆಟ್ಟು, ವಿಷಯಂಗಳೋಡಿದವು.
ಅಲಗು ಎನ್ನೊಳು ನಟ್ಟು ಆನಳಿದ ಕಾರಣ ಚೆನ್ನಮಲ್ಲಿಕಾರ್ಜುನಲಿಂಗವ ಕರದಲ್ಲಿ ಹಿಡಿದೆ.