ಚೆಲ್ವ ಕಂಗಳ ಚೆಲ್ವಕಾರ ನೋಡ ಬಂದೆ ನಿನ್ನ ಬಳಿ ಸಾರ ಬಂದೆ
ಚಕ್ರಧರ ಧುರಧೀರ ನಾರಸಿಂಹ ನಾನು ಬಂದೆ ನಾನು ಬಂದೆ
ಕಲ್ಲೊಳು ವಿಷಯ ಪುಟ್ಟಿಸಿದನಾ ಶುಭವಲ್ಲದ ದಿವಸದೊಳಿರಾ ನೋಡಿಇಲ್ಲದ ಬಯಲ ನಿಂದೆಯ ಪೊತ್ತು ಶುಕಾಮಲ್ಲರೊಡನೆ ಕಾದಿ ಮಲೆತ ಸಾಲ್ವರ ಕೊಂದುಮಡದಿಗೆ ರತ್ನ ತಂದುದರಿಂದ ||1||
ಮಡದಿಯ ಮನೆಯ ಅರ್ಭಕನಾಗಿ ಬಲುಗಡಿಯ ದಾನವನ ಕೊಂದನ ಸೂನುಬಡನಡುವಿನ ಠಾವಿಗೆ ಸಿಲ್ಕಿ ಸುಖಪಡದಿರೆ ರಾಯನಾ ಹಿಡಿದು ತೋಳು ಕಟ್ಟಿದುದರಿಂದ ||2||
ಮೂಲ ವೃಕ್ಷದಾಲಾರ ಮುಂದೆಯ ದಾನವರಿರ್ದಾಲಯ ದಹಿಪನೆಂಬುದಯ್ಯನಬಲಮಾಡಿ ಬಲಗೆ ಇಂದುರುಹಿದೆ ಕಾಗಿನೆಲೆಯಾದಿ ಕೇಶವ ಖಳನ ಗರ್ಭವಿಚ್ಛನ್ನಪ್ರಹ್ಲಾದಗೆ ಪ್ರಸನ್ನವಾದುದರಿಂದ ||3||