ಜಾಣ ನಿನಗೆ ಸರಿಗಾಣೆ
ಪ್ರಮಾಣ ಕೊಟ್ಟ ತರುವಾಯ ತಪ್ಪುವ ನೀನಲ್ಲ
ಅಸುರ ತಾರಕನು ಸುಮನಸರ ಬಳಲಿಸುತಿರಲು
ಬಿಸಿಗಣ್ಣವನ ತಪಸು ಹಾನಿಮಾಡಿ
ಶಶಿವದನೆ ಪಾರ್ವತಿಯಲ್ಲಿ ಗರ್ಭವನಿಡಿಸಿ
ಹಸುಳೆ ಕೈಯಿಂದ ರಾಕ್ಷಸನ ಕೊಲ್ಲಿಸಿದೆ ||1||
ಶಂಬರ ದೈತ್ಯಜನ ವರದಿಂದ ಅನಿಮಿಷ-ಕ
ದಂಬವನು ಸೋಲಿಸಿ ಮೆರೆವುತಿರಲು
ಅಂಬುತನಯುದರದಲ್ಲಿ ಹೊಕ್ಕು ಬೆಳೆದದು ಬಂಡು
ಅಂಬರರು ನಲಿಯೆ ವನಶಿರವ ಚಂಡಾಡಿದಾ ||2||
ಮನಮುಟ್ಟಿ ನಿನ್ನನು ವಂದನೆಮಾಡಿ ನರಗೆ
ಮನದ ತಾಪವ ಬಿಡಿಸಿ ಮುಕ್ತಿ ಕೊಡುವಾ
ಘನ ಕೃಪಾನಿಧಿ ಸಿರಿ ವಿಜಯವಿಠ್ಠಲರೇಯನ
ಅನುಸರಿಸಿ ಬಾಳುವಂತೆ ಏಕಚಿತ್ತವನೀವಾ ||3||