ಜಾಲಿಯ ಮರದಂತೆ

ಜಾಲಿಯ ಮರದಂತೆ ಧರೆಯೊಳು| ದುರ್ಜನರು
ಜಾಲಿಯ ಮರದಂತೆ||
ಮೂಲಾಗ್ರ ಪರಿಯಂತ ಮುಳ್ಳು ಕೂಡಿಪ್ಪಂತೆ||

ಬಿಸಿಲಲ್ಲಿ ಬಳಲಿ ಬಂದವರಿಗೆ ನೆರಳಿಲ್ಲ
ಹಸಿದು ಬಂದವರಿಗೆ ಹಣ್ಣು ಇಲ್ಲ|
ಕುಸುಮ ವಾಸನೆ ಇಲ್ಲ ಕೂಡಲು ಸ್ಥಳವಿಲ್ಲ
ರಸದಲ್ಲಿ ಸ್ವಾದವು ವಿಷದಂತೆ ಇರುತಿಹ||

ತನ್ನಿಂದ ಉಪಕಾರ ತೊಟಕಾದರೂ ಇಲ್ಲ
ಬಿನ್ನಾಣ ಮಾತಿಗೆ ಕೊನೆಯಿಲ್ಲವು |
ಅನ್ನಕ್ಕೆ ಸೇರಿದ ಹೀನ ಮಾನವರಂತೆ
ಇನ್ನಿವರ ಕಾರ್ಯವು ಪುರಂದರವಿಟ್ಠಲ||

                                             —ಪುರಂದರದಾಸ

Leave a Comment

Your email address will not be published. Required fields are marked *