ತೊರೆದು ಜೀವಿಸುಬಹುದೆ ಹರಿ ನಿನ್ನ ಚರಣವನುಬರಿಯ ಮಾತೇಕಿನ್ನು ಅರಿತು ಪೇಳುವೆನಯ್ಯ
ತಾಯಿ ತಂದೆಯ ಬಿಟ್ಟು ತಪವ ಮಾಡಲುಬಹುದುದಾಯಾದಿ ಬಂಧುಗಳ ಬಿಡಲುಬಹುದುರಾಯ ಮುನಿದರೆ ಮತ್ತೆ ರಾಜ್ಯವನು ಬಿಡಬಹುದುಕಾಯಜಪಿತ ನಿನ್ನಡಿಯ ಬಿಡಲಾಗದು ||1||
ಒಡಲು ಹಸಿಯಲು ಅನ್ನವಿಲ್ಲದಲೆ ಇರಬಹುದುಪಡೆದ ಕ್ಷೇತ್ರವ ಬಿಟ್ಟು ಪೋಗಬಹುದುಮಡದಿ ಮಕ್ಕಳ ಕಡೆಗೆ ತೊಲಗಿಸಿಯು ಬಿಡಬಹುದುಕಡಲೊಡೆಯ ನಿನ್ನಡಿಯ ಗಳಿಗೆ ಬಿಡಲಾಗದು ||2||
ಪ್ರಾಣವನು ಪರರು ಬೇಡಿದರೆತ್ತಿ ಕೊಡಬಹುದುಮಾನಾಭಿಮಾನ ತಗ್ಗಿಸಲು ಬಹುದುಪ್ರಾಣನಾಯಕನಾದ ಆದಿಕೇಶವರಾಯಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು ||3||