ಧನದ ಮೇಲೆ ಬಂದವರೆಲ್ಲ ಅನುಸರಿಗಳಲ್ಲದೆ

ಧನದ ಮೇಲೆ ಬಂದವರೆಲ್ಲ ಅನುಸರಿಗಳಲ್ಲದೆ
ಆಗುಮಾಡಬಂದವರಲ್ಲ.
ಮನದ ಮೇಲೆ ಬಂದು ನಿಂದು ಜರೆದು ನುಡಿದು
ಪಥವ ತೋರಬಲ್ಲಡಾತನೆ ಸಂಬಂಧಿ.
ಹಾಗಲ್ಲದೆ ಅವರಿಚ್ಚೆಯ ನುಡಿದು ತನ್ನುದರವ ಹೊರೆವ ಬಚ್ಚಣಿಗಳ ಮಚ್ಚುವನೆ ಚೆನ್ನಮಲ್ಲಿಕಾರ್ಜುನ ?

Leave a Comment

Your email address will not be published. Required fields are marked *