ನಾರಾಯಣೆನು ಮನವೆ ನರಹರಿಯ ನೆನೆ ಮನವೆಘೋರ ದುರಿತಗಳ ಬೆದರಿಸಿ ಓಡಿಸುವುದು
ಗುರುವಿನುಪದೇಶದಲ್ಲಿ ಪರಮ ರಹಸ್ಯವನರಿತುಮರೆಯದಲೆ ಅಲ್ಲಿ ಅಧಿಕಾರಿಯಾಗೊತಿರುಮಂತ್ರವನು ಜಪಿಸು ತಿರುಲಾಂಛನವ ಧರಿಸುಪರಮ ವೈಷ್ಣವರ ಪಂಕ್ತಿಯ ಸೇರು ಮನವೆ ||1||
ಕುಲಛಲಂಗಳ ಬಿಟ್ಟು ಬಲು ಪಾಶಗಳ ತರಿದುಹಲವು ಕೊಂಬೆಗೆ ನೀನು ಹರಿದಾಡದೆಸುಲಭದಲಿ ಶ್ರೀಪಾದತೀರ್ಥ ಪ್ರಸಾದವನುನೆಲೆಗೊಳಿಸಿ ಆತ್ಮನಿಗೆ ನಿತ್ಯ ಸುಖಿಯಾಗೋ ||2||
ಶೇಷವಿಶೇಷವೆಂದೆನಿಪ ಪರಮಾರ್ಥದೊಳುಮೀಸಲಳಿಯದ ಪಾಪರಹಿತನಾಗುವಾಸಾಧಿಪತಿ ಕಾಗಿನೆಲೆಯಾದಿಕೇಶವನದಾಸಾನುದಾಸರಿಗೆ ದಾಸ ನೀನಾಗೊ ||3||