ನೇಮವಿಲ್ಲದ ಹೋಮವೇತಕೆರಾಮನಾಮವಿರದ ಮಂತ್ರವೇತಕೆ
ನೀರ ಮುಣುಗಲು ಏಕೆ ನಾರಿಯಳ ಬಿಡಲೇಕೆವಾರಕೊಂದುಪವಾಸ ಮಾಡಲೇಕೆನಾರಸಿಂಹನ ದಿವ್ಯನಾಮವನು ನೆನೆದರೆಘೋರ ಪಾತಕವೆಲ್ಲ ತೊಲಗಿ ಹೋಗುವುದು ||1||
ಅಂಬರವ ತೊರೆಯಲೇಕೆ ತಾಂಬೂಲ ಬಿಡಲೇಕೆಡಂಭಕದ ವೃತ್ತಿಯಲಿ ಇರಲೇತಕೆಅಂಬುಜನಾಭನನು ಭಾವದಲಿ ನೆನೆದರೆಇಂಬುಂಟು ವೈಕುಂಠವೆಂಬ ಪುರದೊಳಗೆ ||2||
ಬಂಧದೊಳಗೆ ಬಿದ್ದು ಹರಿಯನೆ ನೆನೆಯುತಿರೆಬೆಂದು ಹೋಗುವುವು ದುರಿತಂಗಳೆಲ್ಲಬಂದ ದುಃಖಗಳೆಲ್ಲ ನಿಲ್ಲದಲೆ ಕಳೆಯುವವುಚೆಂದಾಗಿ ನೆಲೆಯಾದಿಕೇಶವನ ನೆನೆಯೆ||3||