ಬರಿದೆ ಹೋಯಿತು ಹೋಯಿತು ಹೊತ್ತು|
ನರಜನ್ಮ ಸ್ಥಿರವೆಂದು ನಾನಿದ್ದೆನೊ ರಂಗ||
ಆಸೆ ಎಂಬುದು ಎನ್ನ ಕ್ಲೇಶಪಡಿಸುತಿದೆ
ಗಾಸಿಯಾದೆನೊ ಹರಿ ನಾರಾಯಣ|
ವಾಸುದೇವನೆ ನಿನ್ನ ಧ್ಯಾನವ ಮಾಡದೆ
ನಾಶವಾಯಿತು ಜನ್ಮ ಮೋಸಹೋದೆನು ಕೃಷ್ಣ||
ಪರರ ಸೇವೆಯ ಮಾಡಿ ಪರರನ್ನೆ ಕೊಂಡಾಡಿ
ಮರುಳುತನದಲಿ ಮತಿಹೀನನಾದೆ|
ನೆರೆ ನಂಬಿದೆನೊ ನಿನ್ನ ಕರುಣದಿಂದಲಿ ಎನ್ನ
ಮರೆಯದೆ ಸಲಹಯ್ಯ ಪುರಂದರವಿಟ್ಠಲ||
—-ಪುರಂದರದಾಸ