ಮನವೆಂಬ ಮರ್ಕಟನು ತನುವೆಂಬ ವೃಕ್ಷವನೇರಿ
ಇಂದ್ರಿಯಂಗಳೆಂಬ ಶಾಖೆಶಾಖೆಗೆ ಹಾರಿ
ವಿಷಯಂಗಳೆಂಬ ಫಲಂಗಳ ಗ್ರಹಿಸಿ
ಭವದತ್ತ ಮುಖವಾಗಿ ಹೋಗುತಿದೆ ನೋಡಾ||
(ಈ) ಮನವೆಂಬ ಮರ್ಕಟನ
(ನಿಮ್ಮ) ನೆನಹೆಂಬ ಪಾಶದಿ ಕಟ್ಟೆ
ಎನ್ನನುಳಿಸಿಕೊಳ್ಳಯ್ಯ ಅಖಂಡೇಶ್ವರಾ||
—ಷಣ್ಮುಖಸ್ವಾಮಿ
ಮನವೆಂಬ ಮರ್ಕಟನು ತನುವೆಂಬ ವೃಕ್ಷವನೇರಿ
ಇಂದ್ರಿಯಂಗಳೆಂಬ ಶಾಖೆಶಾಖೆಗೆ ಹಾರಿ
ವಿಷಯಂಗಳೆಂಬ ಫಲಂಗಳ ಗ್ರಹಿಸಿ
ಭವದತ್ತ ಮುಖವಾಗಿ ಹೋಗುತಿದೆ ನೋಡಾ||
(ಈ) ಮನವೆಂಬ ಮರ್ಕಟನ
(ನಿಮ್ಮ) ನೆನಹೆಂಬ ಪಾಶದಿ ಕಟ್ಟೆ
ಎನ್ನನುಳಿಸಿಕೊಳ್ಳಯ್ಯ ಅಖಂಡೇಶ್ವರಾ||
—ಷಣ್ಮುಖಸ್ವಾಮಿ