ಮರಮರ ಮಥನಿಸಿ ಕಿಚ್ಚು ಹುಟ್ಟಿ
ಸುತ್ತಣ ತರುಮರಾದಿಗಳ ಸುಡಲಾಯಿತ್ತು.
ಆತ್ಮ ಆತ್ಮ ಮಥನಿಸಿ ಅನುಭಾವ ಹುಟ್ಟಿ
ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು.
ಇಂತಪ್ಪ ಅನುಭಾವರ ಅನುಭಾವವ ತೋರಿ
ಎನ್ನ ಒಡಲನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನಾ.
ಮರಮರ ಮಥನಿಸಿ ಕಿಚ್ಚು ಹುಟ್ಟಿ
ಸುತ್ತಣ ತರುಮರಾದಿಗಳ ಸುಡಲಾಯಿತ್ತು.
ಆತ್ಮ ಆತ್ಮ ಮಥನಿಸಿ ಅನುಭಾವ ಹುಟ್ಟಿ
ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು.
ಇಂತಪ್ಪ ಅನುಭಾವರ ಅನುಭಾವವ ತೋರಿ
ಎನ್ನ ಒಡಲನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನಾ.