ಮರೆದೊರಗಿ, ಕನಸ ಕಂಡು ಹೇಳುವಲ್ಲಿ
ಸತ್ತ ಹೆಣ ಎದ್ದಿತ್ತು.
ತನ್ನ ಋಣ ನಿಧಾನ ಎದ್ದು ಕರೆಯಿತ್ತು.
ಹೆಪ್ಪಿಟ್ಟ ಹಾಲು ಗಟ್ಟಿತುಪ್ಪಾಗಿ ಸಿಹಿಯಾಯಿತ್ತು.
ಇದಕ್ಕೆ ತಪ್ಪ ಸಾಧಿಸಲೇಕೆ ಚೆನ್ನಮಲ್ಲಿಕಾರ್ಜುನದೇವರ ದೇವನಣ್ಣಗಳಿರಾ ?
ಮರೆದೊರಗಿ, ಕನಸ ಕಂಡು ಹೇಳುವಲ್ಲಿ
ಸತ್ತ ಹೆಣ ಎದ್ದಿತ್ತು.
ತನ್ನ ಋಣ ನಿಧಾನ ಎದ್ದು ಕರೆಯಿತ್ತು.
ಹೆಪ್ಪಿಟ್ಟ ಹಾಲು ಗಟ್ಟಿತುಪ್ಪಾಗಿ ಸಿಹಿಯಾಯಿತ್ತು.
ಇದಕ್ಕೆ ತಪ್ಪ ಸಾಧಿಸಲೇಕೆ ಚೆನ್ನಮಲ್ಲಿಕಾರ್ಜುನದೇವರ ದೇವನಣ್ಣಗಳಿರಾ ?