ಮರೆಯದಿರು ಹರಿಯಮರೆವರೆ ಮೂರು ಲೋಕದ ದೊರಿಯ
ಮದಗಜ ಹರಿಯೆಂದು ಕರೆಯಲುಒದಗಿ ಆಕ್ಷಣ ಬಂದುಮುದದಿ ನಕ್ರನ ಕೊಂದು ಸಲ-ಹಿದ ಸದ್ಭಕ್ತರ ಬಂಧುಹದುಳ ಪ್ರಹ್ಲಾದನ ಹೆದರಿಸಿದಸುರನಉದರವ ಬಗೆದಂಥದುಭುತ ಮಹಿಮನ||1||
ನಾರಿಯು ತನ್ನ ಕರೆದ ಮಾತ್ರದಿಸೀರೆಯ ಮಳೆಗರೆದಕ್ರೂರ ಖಳನ ತರಿದು ಆ ಪಾಂಡವರಆರಣ್ಯದಿ ಪೊರೆದಗಾರಾದಜಮಿಳ ನಾರಗ ಎನಲುಪಾರಗಾಣಿಸಿದಪಾರ ಗುಣನಿಧಿಯ ||2||
ಒಂದು ಬಾರಿ ಶ್ರೀಶಾ ಎಂದರೆಬಂದ ದುರಿತ ನಾಶಾಬೆಂದವು ಭವ ಪಾಶಾ – ಅವಗೆಂದೆಂದಿಗಿಲ್ಲ ಕ್ಷೇಶಾತಂದೆ ಕದರುಂಡಲಗಿ ಹನುಮಯ್ಯನೊಡೆಯಚಂದಾದಿಕೇಶವನ ನೆನೆದವರೆಂದಿಗು ಧನ್ಯರು||3||