ಯಾರ ಪ್ರೇಮದ ಪರಮಪೂರವು ನೀಚರೆದೆಗೂ ಹರಿಯಿತೋ,
ಯಾವ ಲೋಕಾತೀತಮಹಿಮನ ಕರಣೆ ಲೋಕಕೆ ದುಡಿಯಿತೋ,
ಯಾವನಪ್ರತಿ-ಮಹಿಮನೋ ಮೇಣ್ ಮಾತೆ ಸೀತೆಯ ನಾಥನೋ,
ಯಾರು ಸೀತೆಯ ಭಕುತಿಯಿಂದಲಿ ಜ್ಞಾನದೇಹದಿ ವ್ಯಾಪ್ತನೋ
ಯಾರು ಮಧುತರ ಶಾಂತಗೀತೆಯ ಯುದ್ಧರಂಗದಿ ಮೊಳಗುತ
ಪ್ರಳಯಶಬ್ದವ ಸ್ತಬ್ಧಗೊಳಿಸುತ ಸಿಂಹನಾದವ ಸಿಡಿಸುತ
ಮೋಹತಿಮಿರವನಿಲ್ಲಗೈಯುತ ಕೃಷ್ಣರೂಪದಿ ನಿಂದನೋ
ಅವನೆ ಇಂದಿಗೆ ರಾಮಕೃಷ್ಣನ ಹೆಸರೊಳೆಸೆಯುತಲಿರುವನು!
—-ಮುರಳೀಧರ