ವರಕವಿಗಳ ಮುಂದೆ ನರಕವಿಗಳ ವಿದ್ಯೆ ತೋರಬಾರದು – ಈಧರಣಿಯ ಕಲ್ಲಿಗೆ ಶರಣೆಂದು ಪೂಜೆಯ ಮಾಡಬಾರದು
ಪಾಪಿಗಳಿದ್ದಲ್ಲಿ ರೂಪುಳ್ಳ ವಸ್ತುವ ತೋರಬಾರದು – ಬಹುಕೋಪಿಗಳಿದ್ದಲ್ಲಿ ಅನುಭವಗೋಷ್ಠಿಯ ಮಾಡಬಾರದು||1||
ಅಡಿ ಸತ್ತ ಮಡಕೆಗೆ ಜೋಡಿಸಿ ಒಲೆಗುಂಡು ಹೂಡಬಾರದು – ಬಹುಬಡತನ ಬಂದಾಗ ನೆಂಟರ ಬಾಗಿಲ ಸೇರಬಾರದು||2||
ಹರಿಯ ನಿಂದಿಸಿ ಹರ ಘನನೆಂದು ನರಕಕ್ಕೆ ಬೀಳಬಾರದು – ತಾಪರರನು ಬೈದು ಪಾತಕಕೆ ಮುನ್ನೊಳಗಾಗಬಾರದು ||3||
ಮಡದಿ ನುಡಿಯ ಕೇಳಿ ಜಗಳಕೊಬ್ಬರ ಕೂಡೆ ಹೋಗಬಾರದು – ಬಾ-ಯ್ಬಡಿಕರು ಇದ್ದಲ್ಲಿ ವಸ್ತಿ ಬಿಡಾರವ ಮಾಡಬಾರದು ||4||
ಮುಂದೆ ಭಲಾ ಎಂದು ಹಿಂದೆ ನಿಂದಿಪರನ್ನು ಕೂಡಬಾರದು – ನಮ್ಮತಂದೆ ಬಾಡದಾದಿಕೇಶವನ ಸ್ಮರಣೆಯ ಬಿಡಬಾರದು||5||