ವ್ಯರ್ಥವಾಯಿತಲ್ಲ ಜನ್ಮವು ಸಾರ್ಥಕಾಗಲಿಲ್ಲ
ಅರ್ಥದಾಸೆಯಲಿ ಪೃಥ್ವಿಯೊಳಗೆ ಸುತ್ತಿಮತ್ತನಾಗಿ ಬಲು ಕೃತ್ಯಗಳನು ಮಾಡಿ
ಹರಿಯ ನೆನಯಲಿಲ್ಲ ಹರುಷದಿ ಗರುವ ಪುಟ್ಟಿತಲ್ಲಪರಮ ಮೂಢರಲಿ ನಿರುತ ಸಂಗವ ಮಾಡಿಗುರು ಹಿರಿಯರ ದಯ ದೊರೆಯದೆ ಸುಮ್ಮನೆ||1||
ಏನು ಪೇಳಲೇನು ಎನಗೆ ಹೀನ ಬಿಡದು ಮುನ್ನಶ್ವಾನಗಿಂತಲು ಬಲು ಮಾನಗೆಟ್ಟು ನಾದೀನನಾಗಿ ಮನೆಮನೆಗಳ ತಿರುಗಿ ||2||
ಭಾಗವತರ ಪಾದಕ್ಕೊಂದಿನ ಬಾಗಿ ನಡೆಯಲಿಲ್ಲರಾಗುರಂಗು ಭಕ್ತಿ ಭಾವದೊಳುಬೀಗಿ ಚೆನ್ನಕೇಶವನನು ನೆನೆಯದೆ ||3||