ಸಾವಿರ ಹೊನ್ನಿಂಗೆ ಸಾದಕೊಂಡು

ಸಾವಿರ ಹೊನ್ನಿಂಗೆ ಸಾದಕೊಂಡು
ಸುಣ್ಣವ ಬೆರಸಿದಂತೆ ಮಾಡಿದೆಯಯ್ಯಾ.
ಮೂರು ಲಕ್ಷದ ಬೆಲೆಗೆ ರತ್ನವ ಕೊಂಡು
ಮಡುವಿನಲ್ಲಿ ಇಟ್ಟಂತೆ ಮಾಡಿದೆಯಯ್ಯಾ.
ಚೆನ್ನಮಲ್ಲಿಕಾರ್ಜುನಯ್ಯಾ,
ಎನ್ನ ಮುಟ್ಟಿ ಪಾವನವ ಮಾಡಿ ಕಷ್ಟಸಂಸಾರಿಗೊಪ್ಪಿಸುವಂತೆ ಮಾಡಿದೆಯಯ್ಯಾ.

Leave a Comment

Your email address will not be published. Required fields are marked *