ಹೆದರದಿರು ಮನವೆ, ಬೆದರದಿರು ತನುವೆ,

ಹೆದರದಿರು ಮನವೆ, ಬೆದರದಿರು ತನುವೆ,
ನಿಜವನರಿತು ನಿಶ್ಚಿಂತನಾಗಿರು.
ಫಲವಾದ ಮರನ ಕಲ್ಲಲಿ ಇಡುವುದೊಂದು ಕೋಟಿ,
ಎಲವದಮರನ ಇಡುವರೊಬ್ಬರ ಕಾಣೆ.
ಭಕ್ತಿಯುಳ್ಳವರ ಬೈವರೊಂದುಕೋಟಿ,
ಭಕ್ತಿಯಿಲ್ಲದವರ ಬೈವರೊಬ್ಬರ ಕಾಣೆ.
ನಿಮ್ಮ ಶರಣರ ನುಡಿಯೆ ಎನಗೆ ಗತಿ, ಸೋಪಾನ, ಚೆನ್ನಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *