ಆವ ವಿದ್ಯೆಯ ಕಲಿತಡೇನು
ಸಾವ ವಿದ್ಯೆ ಬೆನ್ನಬಿಡದು.
ಅಶನವ ತೊರೆದಡೇನು, ವ್ಯಸನವ ಮರೆದಡೇನು
ಉಸುರ ಹಿಡಿದಡೇನು, ಬಸುರ ಕಟ್ಟಿದಡೇನು
ಚೆನ್ನಮಲ್ಲಿಕಾರ್ಜುನದೇವಯ್ಯಾ, ನೆಲ
ತಳವಾರನಾದಡೆ ಕಳ್ಳನೆಲ್ಲಿಗೆ ಹೋಹನು
ಆವ ವಿದ್ಯೆಯ ಕಲಿತಡೇನು
ಸಾವ ವಿದ್ಯೆ ಬೆನ್ನಬಿಡದು.
ಅಶನವ ತೊರೆದಡೇನು, ವ್ಯಸನವ ಮರೆದಡೇನು
ಉಸುರ ಹಿಡಿದಡೇನು, ಬಸುರ ಕಟ್ಟಿದಡೇನು
ಚೆನ್ನಮಲ್ಲಿಕಾರ್ಜುನದೇವಯ್ಯಾ, ನೆಲ
ತಳವಾರನಾದಡೆ ಕಳ್ಳನೆಲ್ಲಿಗೆ ಹೋಹನು