ಆಶೆಯಾಮಿಷವಳಿದು, ಹುಸಿ ವಿಷಯಂಗಳೆಲ್ಲ ಹಿಂಗಿ,

ಆಶೆಯಾಮಿಷವಳಿದು, ಹುಸಿ ವಿಷಯಂಗಳೆಲ್ಲ ಹಿಂಗಿ,
ಸಂಶಯ ಸಂಬಂಧ ವಿಸಂಬಂಧವಾಯಿತ್ತು ನೋಡಾ.

ಎನ್ನ ಮನದೊಳಗೆ ಘನಪರಿಣಾಮವ ಕಂಡು
ಮನ ಮಗ್ನವಾಯಿತ್ತಯ್ಯಾ.

ಚೆನ್ನಮಲ್ಲಿಕಾರ್ಜುನಾ, ನಿಮ್ಮ ಶರಣ ಪ್ರಭುದೇವರ
ಕರುಣದಿಂದ ಬದುಕಿದೆನಯ್ಯಾ.

Leave a Comment

Your email address will not be published. Required fields are marked *