ಏನು ಪೇಳಲಿ ತೀರ್ಥಪತಿಯ ಮಹಿಮೆ
ಮಾನವರಿಗೆ ಯಿಲ್ಲಿ ಮುಕ್ತಿ ಏಳಲವಯ್ಯಾ
ಕಾಸಿಯೊಳು ಮರಣ ಮುಕ್ತಿಯೆಂದು ಪೇಳುವದು
ದೇಶದೊಳು ಪುಸಿಯಲ್ಲ ಸಿದ್ಧವೆನ್ನಿ
ಈಶನುಪದೇಶದಿಂದಲಿ ವಿಗತ ಜನನಾಗಿ
ಶ್ರೀ ಶಕ್ತಿ ವೇಣಿಮಾಧವನ ಸನ್ನಿಧಿ ಗೈಯ್ವಾ ||1||
ನಿರುತ ವ್ಯಭಿಚಾರಿ ವಿಪ್ರನ ಕೆಡಿಸಿ ಕಾಸಿಯಲಿ
ಇರಲು ಕಾಲಾಖ್ಯ ಉರಗನು ಕಚ್ಚಲು
ಪರಮಭೀತಿಯಿಂದ ಅವಳ ವಸನವ ತಂದು
ವರ ತ್ರಿವೇಣಿಯೊಳಗೆ ತೊಯಿಸಲು ಗತಿಸಾರ್ದರು ||2||
ಇಲ್ಲಿಗೆ ನಡೆತಂದು ಸ್ನಾನವಂದೆ ಮಾಡಲು
ನಿಲ್ಲದೆ ಸನ್ಮುಕ್ತಿ ಧರನಾಗುವಾ
ಬಲ್ಲಿದಾ ವಿಜಯವಿಠ್ಠಲವೇಣಿ ಮಾಧವನ
ಸಲ್ಲಲಿತ ಪಾದವನು ಕಾಂಬ ಪ್ರಾಣೇಂದ್ರಿಯದಲಿ ||3||