ಕಂಗಳಿವ್ಯಾತಕೋ ಕಾವೇರಿರಂಗನ ನೋಡದ||
ಜಗಂಗಳೊಳಗೆ ಮಂಗಳಮೂರುತಿ
ರಂಗನ ಶ್ರೀಪಾದಂಗಳ ನೋಡದ||
ಎಂದಿಗಾದರೊಮ್ಮೆ ಜನರು
ಬಂದು ಭೂಮಿಯಲ್ಲಿ ನಿಂದು|
ಚಂದ್ರ ಪುಷ್ಕರಣಿ ಸ್ನಾನವ ಮಾಡಿ
ಆನಂದದಿಂದಲಿ ರಂಗನ ಕಾಣದ||
ಹರಿಪಾದೋದಕಸಮ ಕಾವೇರಿ
ವಿರಜಾ ನದಿಲಿ ಸ್ನಾನವ ಮಾಡಿ|
ಪರಮ ವೈಕುಂಠ ರಂಗ ಮಂದಿರ
ಪರವಾಸುದೇವನ ನೋಡದ||
ಹಾರ ಹೀರ ವೈಜಯಂತಿ
ತೋರ ಮುತ್ತಿನ ಹಾರ ಪದಕ|
ತೇರನೇರಿ ಬೀದಿಲಿ ಬರುವ
ರಂಗವಿಟ್ಠಲರಾಯನ ನೋಡದ||
—ಶ್ರೀಪಾದರಾಜಸ್ವಾಮಿ