ಗಟ್ಟಿದುಪ್ಪ ತಿಳಿದುಪ್ಪಕ್ಕೆ ಹಂಗುಂಟೆ ಅಯ್ಯಾ ?
ದೀಪಕ್ಕೆ ದೀಪ್ತಿಗೆ ಭೇದವುಂಟೆ ಅಯ್ಯಾ ?
ಅಂಗಕ್ಕೆ ಆತ್ಮಂಗೆ ಭಿನ್ನವುಂಟೆ ಅಯ್ಯಾ ?
ಎನ್ನಂಗವನು ಶ್ರೀಗುರು ಮಂತ್ರವಮಾಡಿ ತೋರಿದನಾಗಿ,
ಸಾವಯಕ್ಕೂ ನಿರವಯಕ್ಕೂ ಭಿನ್ನವಿಲ್ಲವಯ್ಯಾ.
ಚೆನ್ನಮಲ್ಲಿಕಾರ್ಜುನದೇವರ ಬೆರಸಿ ಮತಿಗೆಟ್ಟವಳನೇತಕ್ಕೆ ನುಡಿಸುವಿರಯ್ಯಾ ?