ಜಯ ಕೃಷ್ಣವೇಣಿ ದುರ್ಜನರ ಗಂಟಲಗಾಣಿ

ಜಯ ಕೃಷ್ಣವೇಣಿ ದುರ್ಜನರ ಗಂಟಲಗಾಣಿ
ನೀ ತಮತಗುಣ ಶ್ರೇಣಿ ನಿತ್ಯ ಕಲ್ಯಾಣಿ

ಹರಜಡಿಯಲಿ ಜನಿಸಿ ಹರಿಪಾದ ಜಲವೆನಿಸಿ
ಮುರಹರನ ವರ್ಣ ಪೆಸರವನೇ ಪೊತ್ತು
ಧರೆಯೊಳಗೆ ಮಹಾಬಳೇಶ್ವರದಲ್ಲಿ ನೆಲೆಯಾಗಿ
ಪೊರಿದೆ ಶರಣಾಗತರ ದುರಿತಗಳ ತರಿದೆ ||1||

ದೋಷರಹಿತಾಥೆರೆಯೊಳು ಸಾಸಿರ ಭಾಗದಲಿ
ಆ ಸಲಿಲ ಬಿಂದು ಪವಮಾನ ಬಂದೂ
ಬೀಸಿದಾ ಸಮಯದಲಿ ಜೀವರಾಸಿಯ ಮೇಲೆ
ಸೂಸಿ ಬೀಳಲು ಕ್ಲೇಶ ಶೋಕ ವಿನಾಶ ||2||

ಅಷ್ಟಾರ್ಥಮಾಸ ಕೃಷ್ಣಪಕ್ಷ ಚತುರ್ದಶಿ
ಕೃಷ್ಣವಾರ ವಿಷ್ಣು ತಾರೆಯಲ್ಲೀ
ಕೃಷ್ಣಕೃಷ್ಣಾ ಎಂದು ನಿಷ್ಠೆಯಿಂದಲಿ ಮನ
ಮುಟ್ಟಿ ಸ್ನಾನವ ಮಾಡೆ ಕಷ್ಟ ಪರಿಹರಿಪ ||3||

ಸೂರಪಾಲಿ ಕಪಟ ಸಂಗಮಛಾಯಾ
ಶ್ರೀ ಶೈಲ ವರ ಚತುಸ್ಥಾನಗಳಲಿ ವಾಸಮಾಡಿ ಇರಲು
ವಾರಣಾಶಿಯ ಫಲಗರೆದು ಜೀವನ್ಮು
ಕ್ತರನು ಮಾಡಿ ಪೊರದೇ ||4||

ಕಲಿಯುಗದಿ ಕೃಷ್ಣಾ ಸ್ನಾನ ಕೃಷ್ಣ ಸ್ಮರಣಿ ವೆ
ಗ್ಗಳವೆಂದು ಅಜನ ಸತಿ ಪೊಗಳಲು
ಜಲನಿಧಿಯ ಉಭಯಮುಖದಲಿ ಕೂಡಿ
ಭಕ್ತರಿಗೆಒಲಿದು ಸಿರಿ ವಿಜಯವಿಠ್ಠಲ ಕಾಣಿಸಿದಿಯಾ||5||

Leave a Comment

Your email address will not be published. Required fields are marked *