ತನ್ನ ಪ್ರಾಪ್ತಿಯ ಫಲವ ತಾನರಿಯದೆ

ತನ್ನ ಪ್ರಾಪ್ತಿಯ ಫಲವ ತಾನರಿಯದೆ
ಇನ್ನು ನುಡಿವುದು ಮೂರ್ಖತನವಲ್ಲದೆ

ಸರಸಿಜೋದ್ಭವನು ಫಣೆಯೊಳು ಬರೆದು ನಿರ್ಮಿಸಿದತೆರನೊಂದು ಬೇರುಂಟೆ ತಾನರಿಯದೆಕೆರಕೊಂಡು ಕಂಡವರ ಕೂಡೆ ತಾನಾಡಿದರೆನೆರೆ ದುಃಖವಿದು ಬಿಟ್ಟು ಕಡೆಗೆ ತೊಲಗುವುದೆ ||1||

ಬಡತನವು ಬಂದಲ್ಲಿ ಬಾಯಿ ಬಿಟ್ಟರೆ ಮುನ್ನಪಡೆದಂಥ ವಿಧಿ ಬೆನ್ನ ಬಿಡಲರಿವುದೆಅಡಿಗಡಿಗೆ ಶೋಕದಲಿ ಅವರಿವರಿಗುಸುರಿದರೆಬಡತನವು ತಾ ಬಿಟ್ಟು ಕಡೆಗೆ ಕದಲುವುದೆ||2||

ದೆಸೆಗೆಟ್ಟು ನಾಡದೈವಂಗಳಿಗೆ ಎರಗಿದರೆನೊಸಲ ಬರೆಹವ ತೊಡೆದು ತಿದ್ದಲಳವೆವಸುಧೇಶ ಕಾಗಿನೆಲೆಯಾದಿಕೇಶವಸನಂಘ್ರಿಬಿಸಜವನು ಕಂಡು ನೀ ಸುಖಿಯಾಗು ಮನುಜ||3||

Leave a Comment

Your email address will not be published. Required fields are marked *