ದಾಸಾರ್ಯರ ದಾಸರ ದಾಸ ನಾನು – ಬಾಡದೀಶ ಕಾಯ್ದುಕೊಳ್ಳೊ
ಗುಟ್ಟುಮಾಡಿಕೊಂಡಿರದೆ ಕಂಡವರಿಗೆ ಕಾರ್ಪಣ್ಯಪಟ್ಟು ಬಡವನಾದೆನಲ್ಲ – ಅಯ್ಯ ಕೈಗೊಟ್ಟು ರಕ್ಷಿಸುವರಿಲ್ಲ ಜನ್ಮ ಜನ್ಮಂಗಳಲಿಪುಟ್ಟುವಂತೆ ಮಾಡಬೇಡ ಮಾಧವ ಮನ್ನಿಸೊ ಎನ್ನ ||1||
ಮಡದಿ ಮಕ್ಕಳೆಂಬ ಪಾಶ ಮಮತೆ ಎನ್ನ ಕೊರಳಬಿಡದೆ ಸುತ್ತಿಕೊಂಡಿತಲ್ಲಯ್ಯಪಡೆದ ದ್ರವ್ಯವೆಲ್ಲ ವಸ್ತು ಕ್ಷೇತ್ರಂಗಳ ಕಾಣದೆ ನಿತ್ಯನಡೆದುದ ವಿಸ್ತರಿಸಲಾರೆ ನೀಲಮೇಘಶ್ಯಾಮ ನಿನ್ನ||2||
ಘೋರ ಸಂಸಾರವೆಂಬ ವಾರಿಧಿಯೊಳಗೆ ಬಿದ್ದುಪಾರಗಾಣದವನಾದೆನಲ್ಲಯ್ಯಧೀರಕರ್ತನಾದ ಬಾಡದಾದಿಕೇಶವೇಶ ಸರ್ವಸಾರಿದೆ ಸಲಹೊ ಎನ್ನುದ್ಧಾರಿ ಮುದ್ದುಕೃಷ್ಣ ನಿನ್ನ ||3||