ನಂದಿ ದೇವಂಗೆ, ಖಳ ಸಿರಿಯಾಳಂಗೆ,
ಲಿಂಗ ದಾಸಿಮಯ್ಯಂಗೆ, ಜಾಗರ ಬಸವಣ್ಣಂಗೆ,
ಆದರಿಕೆಯ ಬಿಟ್ಟು ಜೂಜನಾಡರೆ ನಮ್ಮವರಂದು ?
ಒಬ್ಬಂಗೆ ಮಗನ ರಪಣ, ಒಬ್ಬಂಗೆ ಸೀರೆಯ ರಪಣ,
ಒಬ್ಬಂಗೆ ತನು ಮನ ಧನದ ರಪಣ.
ಮೂವರೂ ಮೂದಲಿಸಿ ಮುಕ್ಕಣ್ಣನ ಗೆಲಿದರು ಎನ್ನ ದೇವ ಚೆನ್ನಮಲ್ಲಿಕಾರ್ಜುನಾ.
ನಂದಿ ದೇವಂಗೆ, ಖಳ ಸಿರಿಯಾಳಂಗೆ,
ಲಿಂಗ ದಾಸಿಮಯ್ಯಂಗೆ, ಜಾಗರ ಬಸವಣ್ಣಂಗೆ,
ಆದರಿಕೆಯ ಬಿಟ್ಟು ಜೂಜನಾಡರೆ ನಮ್ಮವರಂದು ?
ಒಬ್ಬಂಗೆ ಮಗನ ರಪಣ, ಒಬ್ಬಂಗೆ ಸೀರೆಯ ರಪಣ,
ಒಬ್ಬಂಗೆ ತನು ಮನ ಧನದ ರಪಣ.
ಮೂವರೂ ಮೂದಲಿಸಿ ಮುಕ್ಕಣ್ಣನ ಗೆಲಿದರು ಎನ್ನ ದೇವ ಚೆನ್ನಮಲ್ಲಿಕಾರ್ಜುನಾ.