ನಿತ್ಯತೃಪ್ತಂಗೆ ನೈವೇದ್ಯದ ಹಂಗೇತಕ್ಕೆ ?

ನಿತ್ಯತೃಪ್ತಂಗೆ ನೈವೇದ್ಯದ ಹಂಗೇತಕ್ಕೆ ?
ಸುರಾಳ ನಿರಾಳಂಗೆ ಮಜ್ಜನದ ಹಂಗೇತಕ್ಕೆ ?
ಸ್ವಯಂಜ್ಯೋತಿರ್ಮಯಂಗೆ ದೀಪಾರಾಧನೆಯ ಹಂಗೇತಕ್ಕೆ ?
ಸುವಾಸನೆ ಸೂಕ್ಷ್ಮಗಂಧ ಕರ್ಪೂರಗೌರಂಗೆ ಪುಷ್ಪದ ಹಂಗೇತಕ್ಕೆ ?
ಮಾಟದಲಿ ಮನ ನಂಬುಗೆಯಿಲ್ಲದ, ಅಹಂಕಾರಕ್ಕೀಡಾದ,
ಭಕ್ತಿಯೆಂಬ ಪಸಾರವನಿಕ್ಕಿ
ಹೊಲೆಹದಿನೆಂಟುಜನ್ಮವ ಹೊರೆವುದರಿಂದ
ಅಂಗೈಯಲೊರಸಿ ಮುಕ್ತಿಯ
ಮೂಲ ಶಿಖಿರಂಧ್ರದ ಕಾಮನ ಸುಟ್ಟು
ಶುದ್ಭಸ್ಫಟಿಕ ಸ್ವಯಂಜ್ಯೋತಿಯನು
ಸುನಾಳದಿಂದ ಹಂ ಕ್ಷಂ ಎಂಬೆರಡಕ್ಷರವ
ಸ್ವಯಾನುಭಾವಭಕ್ತಿನಿರ್ವಾಣವಾದವರನೆನಗೊಮ್ಮೆ ತೋರಿದೆ. ಶ್ರೀಗಿರಿ ಚೆನ್ನ ಮಲ್ಲಿಕಾರ್ಜುನಾ.

Leave a Comment

Your email address will not be published. Required fields are marked *