ಪಡೆವುದರಿದು ನರಜನ್ಮವ,

ಪಡೆವುದರಿದು ನರಜನ್ಮವ,
ಪಡೆವುದರಿದು ಹರಭಕ್ತಿಯ,
ಪಡೆವುದರಿದು ಗುರುಕಾರುಣ್ಯವ,
ಪಡೆವುದರಿದು ಲಿಂಗಜಂಗಮಸೇವೆಯ,
ಪಡೆವುದರಿದು ಸತ್ಯಶರಣರನುಭಾವವ.
ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ
ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೆ.

Leave a Comment

Your email address will not be published. Required fields are marked *