ಮಂತ್ರಾಲಯನಿವಾಸ ಉತ್ತಮ ಹಂಸ |
ಸಂತಾಪ ಪರಿಹರಿಸ ಕೊಡು ಎನಗೆ ಲೇಸ
ಯತಿಗಳ ಶಿರೋರನ್ನ ಯೋಗಸಂಪನ್ನ |
ಕ್ಷಿತಿಯೊಳಗೆ ನಿನಗೆ ಸರಿಗಾಣೆನೊ ||
ನುತಿಸುವೆ ಭಕ್ತಿಯಲಿ ಬಿಡದೆ |
ಮುಕುತಿಯಲಿ ಸತತಾನಂದದಲಿಪ್ಪ ||1||
ಕಪಿಲ ತೀರ್ಥದಲಿ ಶರಣ ಶುದ್ಧಿಯಲ್ಲಿ |
ತÀಪವ ಮಾಡುವ ಜ್ಞಾನಿ ಸೌಮ್ಯಜ್ಞಾನಿ ||
ಜಪಶೀಲ ಗುಣ ಗಣಾಂಬುಧಿ ಪುಣ್ಯದ ಬುದ್ಧಿ
ಕೃಪೆಮಾಡಿ ಕೊಡು ಗುರುವೆ ಶಿಷ್ಯಸುರತರುವೆ ||2||
ತಮೋಗುಣ ಕಾರ್ಯ ಪೋಗಲಾಡು ವ್ಯಾಪ್ತಿಯಾ |
ಶಮೆದಮೆಯಲ್ಲಿ ಉಳ್ಳ ಮಹಿಮೆಯಾ ||
ನಮಗೆ ಪೇಳುವೆ ವೇದಬಲ್ಲ ವಿನೋದ |
ಸುಮನ ಸುಗುಣವ ಮೆಚ್ಚೆ ದುರ್ಮತಕೆ ಕಿಚ್ಚೆ ||3||
ಕಾಶಿ ಸೇತುವೆ ಮಧ್ಯೆ ಮೆರೆವೇ ಜನರಲ್ಲಿ |
ಭೇದ ವಿದ್ಯಾ ಸಜ್ಜನಕೆ ತಿಳಿಸು ಮನಸು ನಿಲ್ಲಿಪೆ ||
ಪೋಷಿಸುವೆ ಅವರ ಅಟ್ಟುವ ಮಹದುರ |
ದೋಷವ ಕಳೆವಂಥ ವಿಮಲ ಶಾಂತ4
ವರಹಜ ತೀರದಲ್ಲಿದ್ದ ಸುಪ್ರಸಿದ್ದ |
ಮರುತ ಮತಾಂಬುಧಿ ಸೋಮ ನಿಸ್ಸೀಮ ||
ನರಸಿಜಾಪತಿ ನಮ್ಮ ವಿಜಯವಿಠ್ಠಲನಂಘ್ರಿ |
ಸ್ಮರಿಸುವ ಸುಧೀಂದ್ರ ಸುತ ರಾಘವೇಂದ್ರ ||5||